ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಶೇಕಡಾ.15ರಿಂದ 20ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಇದುವರೆಗೂ ಆಸ್ಪತ್ರೆಗಳಲ್ಲಿ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…