ರಾಜ್ಯ

ಏಪ್ರಿಲ್‌ 30ರವರೆಗೆ ಕರಾವಳಿಯಲ್ಲಿ‌ ಬಿಸಿಗಾಳಿ‌ ಅಲೆ‌ ತೀವ್ರ: ಹವಮಾನ ಇಲಾಖೆ ಎಚ್ಚರಿಕೆ

ಮಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ‌ದಿನದಿಂದ ದಿನಕ್ಕೇ‌ ಹೆಚ್ಚುತ್ತಿದೆ. ಹಿನ್ನಲೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಏ.30 ರವರೆಗೆ ತೀವ್ರವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿಸಿಗಾಳಿಯ ಅಲೆ ಹೆಚ್ಚಲಿದೆ ಎಂದು ಭಾರತೀಯ ಹವಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನಲೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಬಿಸಿಲಿನ ಗಾಳಿಯಿಂದ ಆಗುವ ಅಪಾಯಗಳ ಬಗ್ಗೆ ‌ಎಚ್ಚರಿಕೆ ನೀಡಿದೆ.

ಬಿಸಿಗಾಳಿಯಿಂದ ಸನ್ ಸ್ಟ್ರೋಕ್ ಹಾಗೂ ಇನ್ನಿತರ ಖಾಯಿಲೆ ಹರಡುವ ಸಾದ್ಯತೆ ಇದೆ. ಮಧ್ಯಾಹ್ನ 1ರಿಂದ‌ 3ರತನಕ ಹೊರಗೆ ಹೋಗಬಾರದು. ಹಗುರವಾದ, ತೆಳುವಾದ ಬಟ್ಟೆಗಳನ್ನು ಧರಿಸಬೇಕು, ಹೆಚ್ಚು ನೀರು ಕುಡಿಯಬೇಕು ಎಂದು ಸಲಹೆ ನೀಡಿದೆ.

ಶುಕ್ರವಾರ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ‌ ದಾಖಲಾಗಿದೆ. ಜಿಲ್ಲೆಯ ಬಹುತೇಕ ಕಡೆ ಸಂಜೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

5 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

9 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

9 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

10 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

11 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

12 hours ago