ಮಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೇ ಹೆಚ್ಚುತ್ತಿದೆ. ಹಿನ್ನಲೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಏ.30 ರವರೆಗೆ ತೀವ್ರವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿಸಿಗಾಳಿಯ ಅಲೆ ಹೆಚ್ಚಲಿದೆ ಎಂದು ಭಾರತೀಯ ಹವಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನಲೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಬಿಸಿಲಿನ ಗಾಳಿಯಿಂದ ಆಗುವ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ.
ಬಿಸಿಗಾಳಿಯಿಂದ ಸನ್ ಸ್ಟ್ರೋಕ್ ಹಾಗೂ ಇನ್ನಿತರ ಖಾಯಿಲೆ ಹರಡುವ ಸಾದ್ಯತೆ ಇದೆ. ಮಧ್ಯಾಹ್ನ 1ರಿಂದ 3ರತನಕ ಹೊರಗೆ ಹೋಗಬಾರದು. ಹಗುರವಾದ, ತೆಳುವಾದ ಬಟ್ಟೆಗಳನ್ನು ಧರಿಸಬೇಕು, ಹೆಚ್ಚು ನೀರು ಕುಡಿಯಬೇಕು ಎಂದು ಸಲಹೆ ನೀಡಿದೆ.
ಶುಕ್ರವಾರ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಜಿಲ್ಲೆಯ ಬಹುತೇಕ ಕಡೆ ಸಂಜೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…