ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ ನಡೆಯುತ್ತಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವಂತೆ ಜನಗಣತಿ ನಿರ್ದೇಶನಾಲಯ ಸೂಚನೆ ನೀಡಿದೆ.
ಈ ಮೂಲಕ ಒಂದು ವರ್ಷದಲ್ಲಿ 3ನೇ ಬಾರಿಗೆ ಗಣತಿದಾರರಾಗಿ ಕೆಲಸ ನಿಭಾಯಿಸುವ ಹೊಣೆ ಶಿಕ್ಷಕರ ಹೆಗಲೇರಲಿದೆ. ಎರಡನೇ ಹಂತದಲ್ಲಿ 2027ರ ಮಾರ್ಚ್ ತಿಂಗಳಲ್ಲಿ ಜನಸಂಖ್ಯಾ ಗಣತಿ ನಡೆಯಲಿದೆ. ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಽಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ.
ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ. ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…