ರಾಜ್ಯ

ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿ: ಸಚಿವ ಜಾರ್ಜ್

ಬೆಂಗಳೂರು:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ವಿವರಣೆ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು.

“ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.

“ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago