job alert
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ್ತದೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇಲ್ಲ. ಅರ್ಹ ಅಭ್ಯರ್ಥಿಗಳು ಮಾರ್ಚ್ 2 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮಾಸಿಕ 25,000 ರೂ. ಸ್ಟೈಫಂಡ್ ನೀಡಲಾಗುವುದು.
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿಇ ಅಥವಾ ಬಿ.ಟೆಕ್ ಪದವಿಯನ್ನು ಹೊಂದಿರಬೇಕು. ಏಪ್ರಿಲ್ 1, 2023 ರಂದು ಅಥವಾ ನಂತರ ಪದವಿ ಪೂರ್ಣಗೊಳಿಸಿದವರು ಮಾತ್ರ ಅರ್ಹರಾಗಿರುತ್ತಾರೆ.
ಸಾಮಾನ್ಯ, ಒಬಿಸಿ (ಎನ್ಸಿಎಲ್) ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಕನಿಷ್ಠ ಶೇ.60 ಅಂಕಗಳು ಮತ್ತು ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶೇ. 50 ಅಂಕಗಳು ಕಡ್ಡಾಯವಾಗಿದೆ. ಮಾರ್ಚ್ 2, 2026 ರಂತೆ ಅಭ್ಯರ್ಥಿಗಳು 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು. ಮೀಸಲು ವರ್ಗಗಳಿಗೆ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಸ್ಟೈಫಂಡ್ ಮತ್ತು ಆಯ್ಕೆ ಪ್ರಕ್ರಿಯೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000ರೂ. ಸ್ಟೈಫಂಡ್ ಸಿಗಲಿದ್ದು, ಇದರಲ್ಲಿ HPCL ನಿಂದ 20,500ರೂ. ಮತ್ತು ಕೇಂದ್ರ ಸರ್ಕಾರದ DBT ಯೋಜನೆಯ 4,500ರೂ. ಸೇರಿದೆ. ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾತ್ರ ಆಯ್ಕೆ ನಡೆಯಲಿದೆ. ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದಾಖಲೆ ಪರಿಶೀಲನೆಗೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
ಅರ್ಜಿಗಳು ಸಂಪೂರ್ಣವಾಗಿ ಆನ್ಲೈನ್ನಲ್ಲಿರುತ್ತವೆ ಮತ್ತು ಯಾವುದೇ ಶುಲ್ಕವಿಲ್ಲ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ hindustanpetroleum.com ಅಥವಾ jobs.hpcl.co.in ಗೆ ಭೇಟಿ ನೀಡುವ ಮೂಲಕ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸುವ ಮೊದಲು NATS 2.0 ಪೋರ್ಟಲ್ನಲ್ಲಿ ನೋಂದಯಿಸಿಕೊಳ್ಳಿ. ಆನ್ಲೈನ್ ಅರ್ಜಿ ಸಲ್ಲಿಕೆ ಫೆಬ್ರವರಿ 16ರಿಂದ ಪ್ರಾರಂಭವಾಗಿದ್ದು,ಮಾರ್ಚ್ 2ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…
೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…
ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…