ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಆರೋಪಿ ರಿತೇಶ್ಕುಮಾರ್ ಎನ್ಕೌಂಟರ್ ಪ್ರಕರಣ
ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.
ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.
ಇಂಥ ಘಟನೆ ನಡೆದಾಗ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.
ನಿಪ್ಪಾಣಿಯಲ್ಲಿ ಸರ್ಕಾರದಿಂದ ಕಾರ್ಯಕ್ರಮ
ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಭೀಮ ಹೆಜ್ಜೆ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರ್ಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.
ಜಾತಿ ಗಣತಿಗೆ ವಿರೋಧವಿಲ್ಲ
ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಇನ್ನೊಮ್ಮೆ ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…