ರಾಜ್ಯ

Hubballi Encounter | ಪಿಎಸ್‌ಐ ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸು ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಆರೋಪಿ ರಿತೇಶ್‌ಕುಮಾರ್ ಎನ್‌ಕೌಂಟರ್ ಪ್ರಕರಣ

ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್‌ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.

ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.

ಇಂಥ ಘಟನೆ ನಡೆದಾಗ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ನಿಪ್ಪಾಣಿಯಲ್ಲಿ ಸರ್ಕಾರದಿಂದ ಕಾರ್ಯಕ್ರಮ
ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಭೀಮ ಹೆಜ್ಜೆ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರ್ಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.

ಜಾತಿ ಗಣತಿಗೆ ವಿರೋಧವಿಲ್ಲ

ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಇನ್ನೊಮ್ಮೆ ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

4 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

6 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

6 hours ago