ರಾಜ್ಯ

ಹುಬ್ಬಳ್ಳಿ | ಅತ್ಯಾಚಾರ ಯತ್ನ, ಕೊಲೆ ; ಆರೋಪಿ ಎನ್‌ಕೌಂಟರ್‌ಗೆ ಬಲಿ

ಹುಬ್ಬಳ್ಳಿ : ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್‌ ಕುಮಾರ್‌ ಮೃತ ಆರೋಪಿ.

ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ಚಾಕೊಲೇಟ್‌ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅರೋಪಿ ಅಲ್ಲಿನ ಶೆಡ್‌ವೊಂದಕ್ಕೆ ಬಾಲಕಿಯನ್ನು ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಾಲಕಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

 

ಆರೋಪಿ ರಿತೇಶ್‌ ಕುಮಾರ್‌ನನ್ನು ವಶಕ್ಕೆ ಪಡೆದ ಪೊಲೀಸರು ಆತ ವಾಸಿಸುವ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ಮಾಡುವ ವೇಳೆ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಸಹ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಬಳಿಕ ಮತ್ತೊಂದು ಗುಂಡು ಹಾರಿಸಿದಾಗ ಆರೋಪಿ ಬೆನ್ನಿಗೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾಗ ವೈದ್ಯರು ಮೃತ ಪಟ್ಟಿರುವುದಾಗಿ ಹೇಳಿದರು ಎಂದು  ಪೊಲೀಸ್‌ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಮನೆಯ ಮಂಚದ ಕೆಳಗೆ ಚಿರತೆ ಪ್ರಕ್ಷತ್ಯ, ಆತಂಕಕ್ಕೀಡಾದ ಮನೆಮಂದಿ

ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…

19 mins ago

ಚಾರಣಿಗರ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…

57 mins ago

ಅಮೆರಿಕ-ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಸಿದ್ಧತೆ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…

1 hour ago

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

3 hours ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

4 hours ago