ರಾಜ್ಯ

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಕೊಲೆಯ ಕಾರಣ ಬಿಚ್ಚಿಟ್ಟ ಆರೋಪಿ ವಿಶ್ವ

ಬೆಂಗಳೂರು: ಹುಬ್ಬಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ನನ್ನು ಸಿಐಡಿ ಪೊಲೀಸರು ಬುಧವಾರ(ಮೇ.೨೨) ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳ ಮುಂದೆ ಹಂತಕ ವಿಶ್ವ ಕೊಲೆಯ ಕಾರಣ ಬಾಯ್ಬಿಟ್ಟಿದ್ದಾನೆ.

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಹಂತಕ ವಿಶ್ವ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ, ರೈಲಿನಲ್ಲಿಯೂ ಕೂಡ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ತಪ್ಪಿಸಿಕೊಳ್ಳವಾಗ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ತನಿಖೆಯ ಹೊಣೆ ಹೊತ್ತ ಸಿಐಡಿ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ತಮ್ಮ ವಶಕ್ಕೆ ಪಡೆದು, ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.‌

ತನಿಖಾಧಿಕಾರಿಗಳ ಬಳಿ ಮಾತನಾಡಿದ ವಿಶ್ವ, ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದೆ. ಆಕೆ ಬರಲಿಲ್ಲ. ಹಾಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನೆ.

ಅಂಜಲಿ ಕೊಲೆಯಾಗುವ ಹಿಂದಿನ ದಿನ ಅಂಜಲಿ ಆರೋಪಿ ವಿಶ್ವನನ್ನು 2000 ರೂ. ಹಣ ಕೇಳಿದ್ದಳು. ಆದರೆ ಆತ 1000 ರೂ. ಹಣವನ್ನು ಫೋನ್‌ ಪೇ ಮಾಡಿದ್ದ. 1000 ರೂಪಾಯಿ ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಸಿಐಡಿ ಅಧಿಕಾರಿಗಳ ಬಳಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮೇ 15ರಂದು ಮುಂಜಾನೆ ಅಂಜಲಿ ಹತ್ಯೆ ಮಾಡಲಾಗಿತ್ತು. ಇದಕ್ಕೂ ಮುನ್ನ ಆರೋಪಿಯು ಅಂಜಲಿಗೆ ನೇಹಾ ಕೊಲೆಯಾದಂತೆಯೇ ನಿನ್ನ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಆರೋಪಿ ವಿಶ್ವ ಅಂಜಲಿಗೆ ಬೆದರಿಸಿದ್ದ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಗಮನ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು ಎನ್ನಲಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

3 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

3 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

3 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

3 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

3 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago