ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.
ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…