ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.
ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…