ನಿನ್ನೆ ( ಫೆಬ್ರವರಿ 1 ) ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಡೆಸಿದ 28ನೇ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಭಾರೀ ಹಿನ್ನಡೆಯುಂಟಾಗಿದೆ. ಮೇಕೆದಾಟು ಯೋಜನೆಯ ಪ್ರಸ್ತಾವವನ್ನು ಕಾವೇರಿ ಜಲ ಆಯೋಗಕ್ಕೆ ಹಿಂತಿರುಗಿಸುವ ಅಭಿಪ್ರಾಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಬಹುತೇಕ ಸದಸ್ಯರು ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ಕರ್ನಾಟಕವು ಸಭೆಯ ಕಾರ್ಯಸೂಚಿಯನ್ನು ಮುಂದೂಡದೇ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಆದರೆ ಇದಕ್ಕೆ ತಮಿಳುನಾಡು ಹಾಗೂ ಪುದುಚೆರಿ ಆಕ್ಷೇಪ ವ್ಯಕ್ತಪಡಿಸಿದವು.
ರಾಜ್ಯ ಹೇಳಿದ್ದೇನು?
ಕರ್ನಾಟಕದ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಸಲ್ಲಿಕೆಗಳನ್ನು ಪರಿಗಣಿಸಿ, ಪರಿಣತ ಸಂಸ್ಥೆಯು ಸಂಕಷ್ಟದ ವರ್ಷಗಳಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಕೆದಾಟು ಯೋಜನೆಯನ್ನು ಪರಿಗಣಿಸಬೇಕು ಹಾಗೂ ನಿರ್ಧರಿಸಬೇಕು ಎಂದು ಮನವಿ ಮಾಡಿದರು. ಅಲ್ಲದೇ ಮೇಕೆದಾಟು ನಿರ್ಮಾಣದ ಕುರಿತು ನ್ಯಾಯಾಧೀಕರಣದ ತೀರ್ಪಿನಲ್ಲಿ ಅಥವಾ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಯಾವುದೇ ನಿರ್ಬಂಧ ಹಾಗೂ ಅಡೆತಡೆಗಳಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿ ಗಮನ ಸೆಳೆಯಿತು. ಯೋಜನೆಯ ಸಂಕ್ಷಿಪ್ತ ವರದಿ ಬಗ್ಗೆ ಸೂಕ್ತ ನಿಲುವು ತೆಗೆದುಕೊಳ್ಳಬೇಕು ಮತ್ತು ಈ ಯೋಜನೆಯ ವರದಿ ಯಾವುದೇ ನಿಬಂಧನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರ ಜಲ ಆಯೊಗಕ್ಕೆ ಅಭಿಪ್ರಾಯಗಳನ್ನು ರವಾನಿಸುವಂತೆ ಮನವಿ ಮಾಡಿತು.
ಕೊನೆಗೆ ಮೇಕೆದಾಟು ಯೋಜನೆ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿದ್ದು, ಪ್ರಾಧಿಕಾರದಲ್ಲಿ ಯೋಜನೆಯ ಚರ್ಚೆಗೆ ಸುಪ್ರೀಂನಿಂದ ಯಾವುದೇ ನಿರ್ಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇಂದ್ರ ಜಲಶಕ್ತಿ ಸಚಿವಾಲಯದ ಸದಸ್ಯರು ಅಭಿಪ್ರಾಯಪಟ್ಟರು. ಬಳಿಕ ಪ್ರಾಧಿಕಾರದ ಎಲ್ಲ ಸದಸ್ಯರ ಅಭಿಪ್ರಾಯ ಪಡೆಯಲಾಯಿತು.
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…
ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…