ರಾಜ್ಯ

ರಾಜ್ಯದ ಮೇಕೆದಾಟು ಯೋಜನೆಗೆ ಹಿನ್ನಡೆ; ಸಿಡಬ್ಲ್ಯೂಸಿಗೆ ಪ್ರಸ್ತಾವ ವಾಪಸ್‌

ನಿನ್ನೆ ( ಫೆಬ್ರವರಿ 1 ) ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಡೆಸಿದ 28ನೇ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಭಾರೀ ಹಿನ್ನಡೆಯುಂಟಾಗಿದೆ. ಮೇಕೆದಾಟು ಯೋಜನೆಯ ಪ್ರಸ್ತಾವವನ್ನು ಕಾವೇರಿ ಜಲ ಆಯೋಗಕ್ಕೆ ಹಿಂತಿರುಗಿಸುವ ಅಭಿಪ್ರಾಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಬಹುತೇಕ ಸದಸ್ಯರು ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ಕರ್ನಾಟಕವು ಸಭೆಯ ಕಾರ್ಯಸೂಚಿಯನ್ನು ಮುಂದೂಡದೇ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಆದರೆ ಇದಕ್ಕೆ ತಮಿಳುನಾಡು ಹಾಗೂ ಪುದುಚೆರಿ ಆಕ್ಷೇಪ ವ್ಯಕ್ತಪಡಿಸಿದವು.

ರಾಜ್ಯ ಹೇಳಿದ್ದೇನು?

ಕರ್ನಾಟಕದ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಸಲ್ಲಿಕೆಗಳನ್ನು ಪರಿಗಣಿಸಿ, ಪರಿಣತ ಸಂಸ್ಥೆಯು ಸಂಕಷ್ಟದ ವರ್ಷಗಳಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಕೆದಾಟು ಯೋಜನೆಯನ್ನು ಪರಿಗಣಿಸಬೇಕು ಹಾಗೂ ನಿರ್ಧರಿಸಬೇಕು ಎಂದು ಮನವಿ ಮಾಡಿದರು. ಅಲ್ಲದೇ ಮೇಕೆದಾಟು ನಿರ್ಮಾಣದ ಕುರಿತು ನ್ಯಾಯಾಧೀಕರಣದ ತೀರ್ಪಿನಲ್ಲಿ ಅಥವಾ ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಯಾವುದೇ ನಿರ್ಬಂಧ ಹಾಗೂ ಅಡೆತಡೆಗಳಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿ ಗಮನ ಸೆಳೆಯಿತು. ಯೋಜನೆಯ ಸಂಕ್ಷಿಪ್ತ ವರದಿ ಬಗ್ಗೆ ಸೂಕ್ತ ನಿಲುವು ತೆಗೆದುಕೊಳ್ಳಬೇಕು ಮತ್ತು ಈ ಯೋಜನೆಯ ವರದಿ ಯಾವುದೇ ನಿಬಂಧನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರ ಜಲ ಆಯೊಗಕ್ಕೆ ಅಭಿಪ್ರಾಯಗಳನ್ನು ರವಾನಿಸುವಂತೆ ಮನವಿ ಮಾಡಿತು.

ಕೊನೆಗೆ ಮೇಕೆದಾಟು ಯೋಜನೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದ್ದು, ಪ್ರಾಧಿಕಾರದಲ್ಲಿ ಯೋಜನೆಯ ಚರ್ಚೆಗೆ ಸುಪ್ರೀಂನಿಂದ ಯಾವುದೇ ನಿರ್ಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇಂದ್ರ ಜಲಶಕ್ತಿ ಸಚಿವಾಲಯದ ಸದಸ್ಯರು ಅಭಿಪ್ರಾಯಪಟ್ಟರು. ಬಳಿಕ ಪ್ರಾಧಿಕಾರದ ಎಲ್ಲ ಸದಸ್ಯರ ಅಭಿಪ್ರಾಯ ಪಡೆಯಲಾಯಿತು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago