ರಾಜ್ಯ

ರಾಜ್ಯದಲ್ಲಿ ಹೆಚ್ಚಾಯಿತು ಬಾಲ ಗರ್ಭಿಣಿಯರ ಸಂಖ್ಯೆ: 2023ರಲ್ಲಿ 28,657 ಪ್ರಕರಣಗಳು!

ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಇಲಾಖೆ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಜಿಲ್ಲಾವಾರು ಅಂಕಿಅಂಶವನ್ನೂ ಸಹ ನೀಡಿದೆ. ಬೆಂಗಳೂರು, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕಳೆದ ವರ್ಷ 2000ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರು ಗರ್ಭಾವತಿಯಾಗಿದ್ದಾರೆ.

ಇನ್ನು ಈ ರೀತಿ ಅಪ್ರಾಪ್ತ ಬಾಲಕಿಯರು ಗರ್ಭ ಧರಿಸಲು ಹಲವು ಕಾರಣಗಳಿದ್ದು, ಬಾಲ್ಯ ವಿವಾಹ ಪ್ರಮುಖ ಕಾರಣ ಎನ್ನಬಹುದು. ರಾಜ್ಯದಲ್ಲಿ ಗ್ರಾಮದಿಂದ ರಾಜ್ಯ ಮಟ್ಟದವರೆಗೆ 59000ಕ್ಕೂ ಹೆಚ್ಚು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಇದ್ದರೂ ಸಹ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳಿರುವುದು ಆಘಾತಕಾರಿಯಾಗಿದೆ.

ಜಿಲ್ಲಾವಾರು ಅಂಕಿಅಂಶ: ಬೆಂಗಳೂರು ನಗರ 2815, ಬೆಳಗಾವಿ 2754, ವಿಜಯಪುರ 2004, ಬಳ್ಳಾರಿ 1896, ಕಲಬುರಗಿ 1511, ಚಿತ್ರದುರ್ಗ 1412, ತುಮಕೂರು 1375, ಮೈಸೂರು 1370, ರಾಯಚೂರು 1252, ಬಾಗಲಕೋಟೆ 1193, ಬೀದರ್ 1143, ಯಾದಗಿರಿ 921, ಕೋಲಾರ 869, ಹಾಸನ 859, ದಾವಣಗೆರೆ 857, ಮಂಡ್ಯ 846, ಹಾವೇರಿ 713, ಶಿವಮೊಗ್ಗ 596, ಕೊಪ್ಪಳ 571, ಚಿಕ್ಕಬಳ್ಳಾಪುರ 567, ಧಾರವಾಡ 489, ಬೆಂಗಳೂರು ಗ್ರಾಮಾಂತರ 466, ಚಿಕ್ಕಮಗಳೂರು 435, ರಾಮನಗರ 432, ಗದಗ 303, ಕೊಡಗು 270, ಉತ್ತರ ಕನ್ನಡ 184, ದಕ್ಷಿಣ ಕನ್ನಡ 135, ಉಡುಪಿ 56.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago