ರಾಜ್ಯ

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು.

ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ಅರಣ್ಯ ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು.

ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ದವಿದೆ. ಆದ್ದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಬೇಕು ಎಂದರು.

ಹಿರಿಯ ಅಧಿಕಾರಿಗಳು ಆಗಿಂದ್ದಾಗೇ ಕಾಡಿಗೆ ಭೇಟಿ ನೀಡಿ, ಹೆಚ್ಚೆಚ್ಚು ಕಾಡಿನಲ್ಲೇ ಉಳಿಯಬೇಕು. ಆಗ ಮಾತ್ರ ಕೆಳ ಹಂತದ ಸಿಬ್ಬಂದಿ ಕೂಡ ಕಾಡೊಳಗೇ ಇದ್ದು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

5 mins ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

10 mins ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

15 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

21 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

11 hours ago