ರಾಜ್ಯ

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು.

ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ಅರಣ್ಯ ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು.

ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ದವಿದೆ. ಆದ್ದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಬೇಕು ಎಂದರು.

ಹಿರಿಯ ಅಧಿಕಾರಿಗಳು ಆಗಿಂದ್ದಾಗೇ ಕಾಡಿಗೆ ಭೇಟಿ ನೀಡಿ, ಹೆಚ್ಚೆಚ್ಚು ಕಾಡಿನಲ್ಲೇ ಉಳಿಯಬೇಕು. ಆಗ ಮಾತ್ರ ಕೆಳ ಹಂತದ ಸಿಬ್ಬಂದಿ ಕೂಡ ಕಾಡೊಳಗೇ ಇದ್ದು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

3 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

4 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

10 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

10 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

10 hours ago