ರಾಜ್ಯ

ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌

ಅಣಕು ಪ್ರದರ್ಶನ:
ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು.

ಇದನ್ನೂ ಓದಿ:-ಕಟ್ಟೆ ಹೊಡೆದ ಆಕ್ರೋಶ ; ಕಬ್ಬು ತುಂಬಿದ ಟ್ರ್ಯಾಕ್ಟರ್‌ ಉರುಳಿಸಿ ಬೆಂಕಿ ಹಚ್ಚಿದ ರೈತರು

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ
ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು,ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವುದು.

ಸಭೆಯಲ್ಲಿ ಚರ್ಚೆಗೆ ಬಂದ ಇತರೆ ಪ್ರಮುಖ ಸಂಗತಿಗಳು…

ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ
ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ
ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.
ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57,
2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ.
ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ.
ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago