ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ ಕನ್ನಡ ಸಾಮರಸ್ಯದ ನೆಲೆಗಳ 41 ಕೃತಿಗಳ ಲೋಕಾರ್ಪಣೆ ಮಾಡಿ ಮಾತನಾಡಿದರು.
ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ನೂರು ಪುಸ್ತಕಗಳನ್ನು ಹೊರತರಲು ಉದ್ದೇಶಿಸಿದ್ದು, ಉಳಿದ 59 ಪುಸ್ತಕಗಳು ಸಹ ಶೀಘ್ರ ಬಿಡುಗಡೆಯಾಗಲಿದ್ದು ಇಂದು ಬಿಡುಗಡೆಯಾಗಿರುವ ಎಲ್ಲವೂ ಯೋಗ್ಯವಾದ ಪುಸ್ತಕಗಳಾಗಿವೆ. ನಮ್ಮ ದೇಶದಲ್ಲಿ ಅನೇಕ ಭಾಷೆ ಧರ್ಮ ಸಂಸ್ಕೃತಿಗಳು ಇದ್ದು, ರಾಜ್ಯದಲ್ಲಿಯೂ ವೈವಿಧ್ಯತೆ ಇದೆ. ಇದರಲ್ಲಿಯೇ ಏಕತೆಯನ್ನು ನಾವು ಸಾಧಿಸಿದ್ದೇವೆ ಎಂದರು.
ಬಸವ, ಬಾಬಾ ಸಾಹೇಬ್ ಅಂಬೇಡ್ಕರ್, ಬುದ್ಧನಿಂದ ಹಿಡಿದು ಅನೇಕರು ಸಮಾಜ ಸುಧಾರಣೆ ಮಾಡಲು ಪ್ರಯತ್ನಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸಮಾಜದ ಸುಧಾರಣೆಯಲ್ಲಿ ವೇಗ ಹೆಚ್ಚಿದೆ ಯಾದರೂ ಸಾಮಾಜಿಕ ವ್ಯವಸ್ಥೆ ನೂರಕ್ಕೆ ನೂರು ಬದಲಾವಣೆಯಾಗಿಲ್ಲ ಎಂದರು.
ಯುವಕರಲ್ಲಿ ಮಾನವೀಯತೆ ಹೆಚ್ಚಾಗಬೇಕೆನ್ನುವ ನಿಟ್ಟಿನಲ್ಲಿ ಇಂದು ಬಿಡುಗಡೆಯಾಗಿರುವ ಪುಸ್ತಕಗಳು ಪ್ರಯೋಜನಕಾರಿಯಾಗಲಿವೆ. ಇವು ಯುವಜನರನ್ನು ತಲುಪದೇ ಹೋದರೆ, ಅದರಿಂದ ಬದಲಾವಣೆಯಾಗದೆ ಹೋದರೆ ಅದರ ಉದ್ದೇಶ ಸಫಲವಾಗುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ರಿಜ್ವಾನ್ ಅರ್ಷದ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿ ಮಲೆ, ಮೇಲ್ಮನೆ ಸದಸ್ಯ ಭೋಜೆ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುನಾಥ್, ಉಪಸ್ಥಿತರಿದ್ದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…