ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ಚಳಗಾಲದ ಅಧಿವೇಶನದ ಸಮಯದಲ್ಲಿ ವಿಧಾನ ಪರಿಷತ್ನಲ್ಲಿ ನಡೆದ ಘಟನೆಯ ತನಿಖೆ ಇನ್ನು ಪ್ರಗತಿಯಲ್ಲಿದೆ. ಆದರು ಅವರನ್ನು ಕಾನೂನು ಬಾಹಿರವಾಗಿ ಪೊಲೀಸರು ಬಂಧಿಸಿ ರಾತ್ರಿಯೆಲ್ಲಾ ಸುತ್ತಾಡಿಸುವ ಮೂಲಕ ತುಂಬಾ ತೊಂದರೆ ನೀಡಿದ್ದರು.
ಈಗ ಸಚಿವೆ ಹತ್ತಿರ ಕ್ಷಮೆ ಕೇಳುವಂತೆ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದೆಗೆಟ್ಟಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ರವಿ ಮೇಲೆ ಗೂಂಡಾಗಿರಿ ಮಾಡಿದವರು ಮತ್ತು ಬೆದರಿಕೆ ಪತ್ರ ಬರೆದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭೇಟಿ ಕುರಿತು ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇನೆ. ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಸೇವೆ ಬೆಳಗಾವಿಗೆ ವಿಸ್ತರಣೆ ಆಗಿಲ್ಲ. ತಾವು ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಬೇಕು. ಜೊತೆಗೆ ಉಡಾನ್ ಯೋಜನೆ ಮುಂದುವರಿಸುವಂತೆ ಕೋರಿದ್ದೇನೆ ಎಂದರು.
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…