ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ಚಳಗಾಲದ ಅಧಿವೇಶನದ ಸಮಯದಲ್ಲಿ ವಿಧಾನ ಪರಿಷತ್ನಲ್ಲಿ ನಡೆದ ಘಟನೆಯ ತನಿಖೆ ಇನ್ನು ಪ್ರಗತಿಯಲ್ಲಿದೆ. ಆದರು ಅವರನ್ನು ಕಾನೂನು ಬಾಹಿರವಾಗಿ ಪೊಲೀಸರು ಬಂಧಿಸಿ ರಾತ್ರಿಯೆಲ್ಲಾ ಸುತ್ತಾಡಿಸುವ ಮೂಲಕ ತುಂಬಾ ತೊಂದರೆ ನೀಡಿದ್ದರು.
ಈಗ ಸಚಿವೆ ಹತ್ತಿರ ಕ್ಷಮೆ ಕೇಳುವಂತೆ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದೆಗೆಟ್ಟಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ರವಿ ಮೇಲೆ ಗೂಂಡಾಗಿರಿ ಮಾಡಿದವರು ಮತ್ತು ಬೆದರಿಕೆ ಪತ್ರ ಬರೆದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭೇಟಿ ಕುರಿತು ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇನೆ. ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಸೇವೆ ಬೆಳಗಾವಿಗೆ ವಿಸ್ತರಣೆ ಆಗಿಲ್ಲ. ತಾವು ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಬೇಕು. ಜೊತೆಗೆ ಉಡಾನ್ ಯೋಜನೆ ಮುಂದುವರಿಸುವಂತೆ ಕೋರಿದ್ದೇನೆ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…