ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ಚಳಗಾಲದ ಅಧಿವೇಶನದ ಸಮಯದಲ್ಲಿ ವಿಧಾನ ಪರಿಷತ್ನಲ್ಲಿ ನಡೆದ ಘಟನೆಯ ತನಿಖೆ ಇನ್ನು ಪ್ರಗತಿಯಲ್ಲಿದೆ. ಆದರು ಅವರನ್ನು ಕಾನೂನು ಬಾಹಿರವಾಗಿ ಪೊಲೀಸರು ಬಂಧಿಸಿ ರಾತ್ರಿಯೆಲ್ಲಾ ಸುತ್ತಾಡಿಸುವ ಮೂಲಕ ತುಂಬಾ ತೊಂದರೆ ನೀಡಿದ್ದರು.
ಈಗ ಸಚಿವೆ ಹತ್ತಿರ ಕ್ಷಮೆ ಕೇಳುವಂತೆ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದೆಗೆಟ್ಟಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ರವಿ ಮೇಲೆ ಗೂಂಡಾಗಿರಿ ಮಾಡಿದವರು ಮತ್ತು ಬೆದರಿಕೆ ಪತ್ರ ಬರೆದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭೇಟಿ ಕುರಿತು ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇನೆ. ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಸೇವೆ ಬೆಳಗಾವಿಗೆ ವಿಸ್ತರಣೆ ಆಗಿಲ್ಲ. ತಾವು ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಬೇಕು. ಜೊತೆಗೆ ಉಡಾನ್ ಯೋಜನೆ ಮುಂದುವರಿಸುವಂತೆ ಕೋರಿದ್ದೇನೆ ಎಂದರು.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…