ರಾಜ್ಯ

ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ ನಡೆದಿದ್ದು, ಮತ್ತಿಕೆರೆಯ ಜೆ.ಪಿ.ಪಾರ್ಕ್‌ನಲ್ಲಿ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದರು.

ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ. ನನ್ನ ಮೇಲೆ ಸಚಿವರು ಕೈ ಎತ್ತಿ ಹೊಡೆಯುವ ಯತ್ನ ನಡೆದಿದೆ. ಸ್ಥಳೀಯ ಶಾಸಕನಾದ ನನ್ನನ್ನು ಕರೆದಿಲ್ಲ. ವೇದಿಕೆಗೆ ಹೋಗಲು ಹೋದಾಗ ಪೊಲೀಸರು ನನ್ನನ್ನು ತಡೆದರು. ನನ್ನ ಮೇಲೆ ಹಲ್ಲೆಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಇದನ್ನು ಓದಿ : ಶೂ ಎಸೆದ ಘಟನೆ ಭವಿಷ್ಯದ ಆತಂಕಕಾರಿ ಬೆಳವಣಿಗೆ 

ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆತಂದಿದ್ದಾರೆ. ನನ್ನ ಮೇಲೆ ರೌಡಿಸಂ ನಡೆಸುತ್ತಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವೋ ಕಾಂಗ್ರೆಸ್‌ ಕಾರ್ಯಕ್ರಮವೋ ಎಂದು ಪ್ರಶ್ನೆ ಮಾಡಿದರು.

ಸೋತ ಅಭ್ಯರ್ಥಿಯನ್ನು ಕೂರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಸಂಸದರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

4 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

25 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

46 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

1 hour ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago