ಧಾರವಾಡ: ಸಿಎಂ ಆಗಲು ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನನಗೂ ಕೂಡ ಸಿಎಂ ಆಗಬೇಕೆಂಬ ಆಸೆಯಿದೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಸಿಎಂ ಪಾತ್ರ ಏನೂ ಇಲ್ಲ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಗೊತ್ತು. ಹೀಗಾಗಿ ಅವರು ಮೊದಲು ಬಿಜೆಪಿ ಪಾದಯಾತ್ರೆಗೆ ಹೋಗಲ್ಲ ಎಂದಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ಹೇಳಿದ್ದಕ್ಕೆ ಪಾದಯಾತ್ರೆಗೆ ಹೋಗಿದ್ದರು ಎಂದರು.
ಇನ್ನು ಎರಡೂವರೆ ವರ್ಷದ ಬಳಿಕವೂ ಸಿಎಂ ಬದಲಾವಣೆ ಇಲ್ಲ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ. ಎಲ್ಲೂ ಕೂಡ ಸಿಎಂ ಬದಲಾವಣೆ ಮಾಡುವ ವಿಷಯವೇ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…
ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…
ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…
ವಾಷಿಂಗ್ಟನ್: ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…