ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025 ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.
ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು.
ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.
ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ.
ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.
ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…