ರಾಜ್ಯ

ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ : ಸಿ.ಪಿ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿದ್ದಾರೆ.

ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಕಳೆದ ವಾರ ಅವರನ್ನ ಭೇಟಿ ಮಾಡಿ ಚರ್ಚೆಮಾಡಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್‌ ನವರು ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಅದಕ್ಕೆ ಎಚ್‌ಡಿಕೆ ನನ್ನನ್ನೆ ನಿಲ್ಲುವಂತೆ ಹೇಳಿದ್ದಾರೆ. ಆದರೆ ಅಧಿಕೃತ ಅನುಮೋದನೆ ಸಿಗಬೇಕು ಅಷ್ಟೇ. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು  ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಎನ್‌ ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಎಚ್‌ ಡಿ ಕೆ ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೆ ಕಾಣುತ್ತಿರಲಿಲ್ಲ. ಚನ್ನಪಟ್ಟಣ ಜನ ನನ್ನನ್ನ ಕೈ ಬಿಡುತ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ . ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು ಎಂದು ಸಿಪಿವೈ ಹೇಳಿದರು

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

21 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

24 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

24 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

24 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

24 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

24 hours ago