ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಕಳೆದ ವಾರ ಅವರನ್ನ ಭೇಟಿ ಮಾಡಿ ಚರ್ಚೆಮಾಡಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ನವರು ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಅದಕ್ಕೆ ಎಚ್ಡಿಕೆ ನನ್ನನ್ನೆ ನಿಲ್ಲುವಂತೆ ಹೇಳಿದ್ದಾರೆ. ಆದರೆ ಅಧಿಕೃತ ಅನುಮೋದನೆ ಸಿಗಬೇಕು ಅಷ್ಟೇ. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಎಚ್ ಡಿ ಕೆ ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೆ ಕಾಣುತ್ತಿರಲಿಲ್ಲ. ಚನ್ನಪಟ್ಟಣ ಜನ ನನ್ನನ್ನ ಕೈ ಬಿಡುತ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ . ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು ಎಂದು ಸಿಪಿವೈ ಹೇಳಿದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…