ರಾಜ್ಯ

ನಾನು ಒಬ್ಬಂಟಿ- ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ : ಸಿ.ಟಿ.ರವಿ

ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತು ಪಕ್ಷದ ಕಟ್ಟಾ ಕಾರ್ಯಕರ್ತ. ೧೯೮೮-೯೯ರಲ್ಲಿ ಬಿಜೆಪಿಯನ್ನು ಆರಿಸಿಕೊಂಡಾಗ ನನ್ನ ಮನೆ ಹಾಗೂ ನನ್ನ ಊರಿನಲ್ಲು ನಾನು ಒಬ್ಬಂಟಿಯಾಗಿದ್ದೆ. ಒಂದೊಂದೆ ಮೆಟ್ಟಿಲು ಹತ್ತುತ್ತಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗೆ ಬಂದಿದ್ದೇನೆ ಎಂದು ತಿಳಿಸಿದರು.

ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ. ಪಕ್ಷವನ್ನು ಬಲ ಪಡಿಸುವುದು ನನ್ನ ಕೆಲಸ. ಅದನ್ನು ಮಾಡುತ್ತಾ ಬಂದಿದ್ದೇನೆ. ವೈಯಕ್ತಿಕ ಹಿತಾಸಕ್ತಿಯನ್ನು ಮೀರಿದ ಚುನಾವಣೆ ಇದು, ಕೇವಲ ರಾಷ್ಟ್ರೀಯ ಹಿತಾಶಕ್ತಿಯನ್ನು ಮಾತ್ರ ಚಿಂತೆ ಮಾಡಬೇಕಿದೆ ಎಂದರು.

ಮೋದಿ ಮತ್ತೊಮ್ಮೆ ಎಂಬ ಒಂದೇ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.

ಯಡಿಯೂರಪ್ಪ ಹಾಗೂ ಈಶ್ವರಪ್ಪ ಹಿರಿಯರು ಮತ್ತು ಹಿಂದಿನಿಂದಲೂ ಒಳ್ಳೆಯ ಸ್ನೇಹಿತರು. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಬಿಸಿನೆಸ್‌ ಪಾರ್ಟ್‌ನರ್ಸ್‌ ಆಗಿದ್ದರು ಎಂದು ಕೇಳಿದ್ದೇನೆ. ಅವರಿಬ್ಬರ ಮಧ್ಯೆ ಏನೇ ಸಮಸ್ಯೆ ಇದ್ದರೂ ಯಡಿಯೂರಪ್ಪ ಅವರು ಸರಿಪಡಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

andolanait

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

12 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

12 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

13 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

13 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

13 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

13 hours ago