ರಾಜ್ಯ

ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ನಾನೇನು ಸನ್ಯಾಸಿಯಲ್ಲ, ನನ್ನ ಹಕ್ಕು ಕೇಳುತ್ತಿದ್ದೇನೆ. ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಹಾಗೆಯೇ ಪ್ರಬಲ ಆಕಾಂಕ್ಷಿ ಎಂಬುದನ್ನೂ ಮನದಟ್ಟು ಮಾಡಿದ್ದೇನೆ ಎಂದರು. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹರಿಸುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನೂ ಹೈಕಮಾಂಡ್ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ: ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ : ಸಚಿವ.ಎನ್.ಚಲುವರಾಯಸ್ವಾಮಿ

ನನ್ನದು ಹೈಕಮಾಂಡ್ ಬಣ
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ರಾಜ್ಯದಲ್ಲಿ ಗೊಂದಲವಿದೆ. ಇದರಿಂದ ಪಕ್ಷಕ್ಕೂ ಹಾನಿಯಾಗುತ್ತಿದೆ. ಕೇಂದ್ರದ ನಾಯಕರೇ ಈ ಸಮಸ್ಯೆ ಪರಿಹರಿಸಬೇಕು. ಸಹಿ ಸಂಗ್ರಹ ವಿಚಾರದಲ್ಲಿ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಯಾವುದೇ ಬಣದಲ್ಲಿ ಗುರುತಿಸಿಕೊಂಡಿಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಜವಾದ ಬಣದಲ್ಲಿ ಇದ್ದೇನೆ. ನನ್ನದು ಹೈಕಮಾಂಡ್ ಬಣ ಎಂದರು.ಡಿ.ಕೆ.ಶಿವಕುಮಾರ್ ತಾವು ಮುಖ್ಯಮಂತ್ರಿ ಆಗಬೇಕು ಎಂದು ಕೇಳಿದ್ದಾರೆ. ಜಿ.ಪರಮೇಶ್ವರ ಅವರು ಸಹ ಸಿಎಂ ಸ್ಥಾನ ಕೇಳಿದ್ದಾರೆ. ಆದರೆ ಸಿಎಂ ಸ್ಥಾನ ಕೊಡುವುದು ಅಥವಾ ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ರಾಷ್ಟ್ರೀಯ ನಾಯಕರು ತೀರ್ಮಾನಿಸಿದರೆ ಸಿಎಂ ಸಹ ಬದಲಾಗಬಹುದು, ಮಂತ್ರಿಗಳು ಕೂಡ ಬದಲಾಗಬಹುದು ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ರಾಜ್ಯ ನಿರ್ದೇಶಕ ಎಂ.ಶ್ರೀಕಾಂತ್ ಇದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago