ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.
ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಸಿಟಿ ರವಿ ಇದರು ಎಂಬ ಪ್ರಶ್ನೆಗೆ, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ ಸ್ಥಾನ, ನಾನು ಸಾಮಾನ್ಯ ಕಾರ್ಯಕರ್ತ ಎಂದು ಪ್ರತಿಕ್ರಿಯೆ ನೀಡಿದರು.
ನಾನು ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ, ಮಾತನಾಡಲು ಬಹಳ ವಿಷಯವಿದೆ, ಈ ಮಾತನಾಡಿದರೇ ನನ್ನ ಮಾತೆ ನನಗೆ ತಿರುಗುಬಾಣವಾಗುತ್ತದೆ ಎಂದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…