ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.
ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಸಿಟಿ ರವಿ ಇದರು ಎಂಬ ಪ್ರಶ್ನೆಗೆ, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ ಸ್ಥಾನ, ನಾನು ಸಾಮಾನ್ಯ ಕಾರ್ಯಕರ್ತ ಎಂದು ಪ್ರತಿಕ್ರಿಯೆ ನೀಡಿದರು.
ನಾನು ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ, ಮಾತನಾಡಲು ಬಹಳ ವಿಷಯವಿದೆ, ಈ ಮಾತನಾಡಿದರೇ ನನ್ನ ಮಾತೆ ನನಗೆ ತಿರುಗುಬಾಣವಾಗುತ್ತದೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…