ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್ ವಿಚಾರವಾಗಿ ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್.19ರೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕರು ಸಹಾಯ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…