ರಾಜ್ಯ

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್‌ ವಿಚಾರವಾಗಿ ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್‌ಶೀಟ್‌ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್‌ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್.‌19ರೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ನಮ್ಮ ಕಾಂಗ್ರೆಸ್‌ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್‌ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕರು ಸಹಾಯ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

6 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

6 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

21 hours ago