ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತೊಮ್ಮೆ ಅಕಾಡ ಪ್ರವೇಶಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ ಕುರಿತಾಗಲಿ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಯಾರಾದರೂ ನನ್ನ ಹೆಸರನ್ನು ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನನ್ನ ಸಾಮಥ್ರ್ಯವನ್ನು ಎಷ್ಟು ಬಾರಿ ಸಾಬೀತುಪಡಿಸಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಎಂಟು ವರ್ಷ ಕೆಲಸ ಮಾಡಿದ್ದೇನೆ. ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಾಮಥ್ರ್ಯ ಇಲ್ಲದೆ ಇದ್ದರೆ ಉಪಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೆ. ನನ್ನ ಸಾಮರ್ಥ್ಯದ ಬಗ್ಗೆ ಯಾರು ಪ್ರಶ್ನೆ ಮಾಡುವಂತಿಲ್ಲ. ಹಲವಾರು ಬಾರಿ ನಾನು ಅದನ್ನು ಸಾಬೀತುಪಡಿಸಿದ್ದೇನೆ. ಆದರೆ ಸನ್ನಿವೇಶ ಮತ್ತು ಪಕ್ಷದ ತೀರ್ಮಾನ ಎಲ್ಲವನ್ನೂ ಆಧರಿಸಿರುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

4 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

4 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

4 hours ago