ಕಾರವಾರ: ಅಧಿಕಾರಕ್ಕಾಗಿ ಬಿಜೆಪಿಯಲ್ಲಿನ ಒಳಜಗಳ ಹಾಗೂ ಅಲ್ಲಿನ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ ಎಂದು ಬಿಜೆಪಿ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗಾರರೊದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಷ್ಟು ಬಣ ಇದೆ ಎಂಬುದು ಗೊತ್ತಿಲ್ಲ. ನಾನು ಮತ್ತು ರಾಜಶೇಖರ್ ನಿರ್ಣಯ ತೆಗೆದುಕೊಂಡಾಗ ತಪ್ಪು ಎಂದ ರಾಜ್ಯ ಬಿಜೆಪಿ ನಾಯಕರೆಲ್ಲ ಈಗ ಅವರೇ ತಪ್ಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಆಗುತ್ತಿರುವ ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿ, ಸರಿಯಾದ ಸಮಯ ನೋಡಿ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ದೊರೆಯದ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿತ್ತು. ಈಗ ಎಲ್ಲ ಸರಿಯಾಗುತ್ತಿದೆ. ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಇಂತಹ ಯೋಜನೆಗಳ ಅನುಷ್ಠಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ ಬಿಜೆಪಿ ಮುಂಬೈ, ದೆಹಲಿಯಲ್ಲಿ ಏನು ಮಾಡಿತು ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…