dk shivkumar (2)
ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಸಿಎಂ ಆಗೋ ಟೈಂ ಹತ್ತಿರ ಬಂದಿದೆ ಎಂದು ಎಲ್ಲೂ ಕೂಡ ಹೇಳಿಲ್ಲ. ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದೇ ನನ್ನ ಗುರಿ, ಜನರ ಸೇವೆ ಮಾಡಲು ಹಗಲು ರಾತ್ರಿ ಎನ್ನದೇ ತಿರುಗುತ್ತಿದ್ದೇನೆ ಎಂದರು.
ಇದನ್ನು ಓದಿ: ಡಿಕೆಶಿ ನವೆಂಬರ್ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಬಳಿ ಬರುವ ಜನರೆಲ್ಲಾ ನೀವು ಸಿಎಂ ಆಗಬೇಕು ಅಂತಾರೆ. ಆದರೆ ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಕಾಂಗ್ರೆಸ್ನ ಹಲವಾರು ಶಾಸಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನವೆಂಬರ್ನಲ್ಲಿ ಕ್ರಾಂತಿ ಆಗುತ್ತದೆ ಎಂದು ಪದೇ ಪದೇ ಬಹಿರಂಗ ಹೇಳಿಕೆ ಕೊಡುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…