dk shivkumar (2)
ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಸಿಎಂ ಆಗೋ ಟೈಂ ಹತ್ತಿರ ಬಂದಿದೆ ಎಂದು ಎಲ್ಲೂ ಕೂಡ ಹೇಳಿಲ್ಲ. ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದೇ ನನ್ನ ಗುರಿ, ಜನರ ಸೇವೆ ಮಾಡಲು ಹಗಲು ರಾತ್ರಿ ಎನ್ನದೇ ತಿರುಗುತ್ತಿದ್ದೇನೆ ಎಂದರು.
ಇದನ್ನು ಓದಿ: ಡಿಕೆಶಿ ನವೆಂಬರ್ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಬಳಿ ಬರುವ ಜನರೆಲ್ಲಾ ನೀವು ಸಿಎಂ ಆಗಬೇಕು ಅಂತಾರೆ. ಆದರೆ ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಕಾಂಗ್ರೆಸ್ನ ಹಲವಾರು ಶಾಸಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನವೆಂಬರ್ನಲ್ಲಿ ಕ್ರಾಂತಿ ಆಗುತ್ತದೆ ಎಂದು ಪದೇ ಪದೇ ಬಹಿರಂಗ ಹೇಳಿಕೆ ಕೊಡುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…