dk shivkumar (2)
ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಸಿಎಂ ಆಗೋ ಟೈಂ ಹತ್ತಿರ ಬಂದಿದೆ ಎಂದು ಎಲ್ಲೂ ಕೂಡ ಹೇಳಿಲ್ಲ. ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದೇ ನನ್ನ ಗುರಿ, ಜನರ ಸೇವೆ ಮಾಡಲು ಹಗಲು ರಾತ್ರಿ ಎನ್ನದೇ ತಿರುಗುತ್ತಿದ್ದೇನೆ ಎಂದರು.
ಇದನ್ನು ಓದಿ: ಡಿಕೆಶಿ ನವೆಂಬರ್ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಬಳಿ ಬರುವ ಜನರೆಲ್ಲಾ ನೀವು ಸಿಎಂ ಆಗಬೇಕು ಅಂತಾರೆ. ಆದರೆ ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಕಾಂಗ್ರೆಸ್ನ ಹಲವಾರು ಶಾಸಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನವೆಂಬರ್ನಲ್ಲಿ ಕ್ರಾಂತಿ ಆಗುತ್ತದೆ ಎಂದು ಪದೇ ಪದೇ ಬಹಿರಂಗ ಹೇಳಿಕೆ ಕೊಡುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…