ರಾಜ್ಯ

ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ‍್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಯಾವುದೇ ರ‍್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.

ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.

ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಇಂದು ಸಂಜೆ 4 ಗಂಟೆಗೆ ನಾನು ಸ್ವಾಮೀಜಿಗಳು, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ ಸೇರಿದಂತೆ ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಈ ಸಭೆಯಲ್ಲಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ಸಚಿವರು ತಿಳಿಸಿದರು.

ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರ್ತೀವಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

4 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

4 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

4 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

9 hours ago