ರಾಜ್ಯ

ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ‍್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಯಾವುದೇ ರ‍್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.

ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.

ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಇಂದು ಸಂಜೆ 4 ಗಂಟೆಗೆ ನಾನು ಸ್ವಾಮೀಜಿಗಳು, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ ಸೇರಿದಂತೆ ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಈ ಸಭೆಯಲ್ಲಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ಸಚಿವರು ತಿಳಿಸಿದರು.

ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರ್ತೀವಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago