ramalinga reddy
ಬೆಂಗಳೂರು: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ನನ್ನನ್ನು ಸಿಎಂ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಸಿಎಂ ಸ್ಥಾನ ಸಹ ಖಾಲಿ ಇಲ್ಲ. ನಾನು ಅದರ ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು ಎಂದು ತಿಳಿಸಿದ್ದಾರೆ.
ಇನ್ನು ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕೋರಿದ್ದಾರೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…