ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ. ತಾಲ್ಲೂಕಿನಿಂದ ಅತಿ ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನ ಬೇಡ ಎಂದು ಹೇಳಿದರು.



