ನವದೆಹಲಿ : ಈಶ್ವರಪ್ಪ ಅವರ ಪುತ್ರ ಕಾಂತೇಶ್ಗೆ ಟಿಕೆಟ್ ಕೈತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅನಗತ್ಯವಾಗಿ ತಪ್ಪು ತಿಳಿದಿದ್ದಾರೆ. ಅವರ ಮಗನಿಗೆ ಟಿಕೆಟ್ ಕೈತಪ್ಪಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ನಿರ್ಧಾರ ನನ್ನದಲ್ಲ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ಯಾವುದೇ ತೀರ್ಮಾನ ನನ್ನದಲ್ಲ. ಎಲ್ಲವೂ ಕೇಂದ್ರ ವರಿಷ್ಠರು ಹಾಗೂ ರಾಜ್ಯದ ಎಲ್ಲಾ ನಾಯಕರನು ಸೇರಿ ಕೈಗೊಳ್ಳುತ್ತಾರೆ ಎಂದರು.
ಬಿ.ವೈ.ವಿಜಯೇಂದ್ರ ಭವಿಷ್ಯ ಜನ ತೀರ್ಮಾನ ಮಾಡ್ತಾರೆ : ಲೋಕಸಭಾ ಚುನಾವಣೆ ನಂತರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸ್ಥಿತಿ ಬರುತ್ತದೆ ಎಂದು ಹೇಳದ್ದ ಈಶ್ವರಪ್ಪ ಮಾತಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಈಶ್ವರಪ್ಪ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಲು ನಾನು ಮತ್ತು ವಿಜಯೇಂದ್ರ ಕಾರಣ ಎಂದು ತಿಳಿದಿದ್ದಾರೆ. ಹೀಗಾಗಿ ಇಂತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಪಕ್ಷದ ಸಂಘಟನೆಯಲ್ಲಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇರಬೇಕೆ ಬೇಡವೇ ಎಂದು ಜನ ತೀರ್ಮಾನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…