ರಾಜ್ಯ

ಈಶ್ವರಪ್ಪ ಪುತ್ರನಿಗೆ ಟಿಕೆಟ್‌ ತಪ್ಪಲು ನಾನು ಕಾರಣ ಅಲ್ಲ : ಯಡಿಯೂರಪ್ಪ !

ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು.

ರಾಜ್ಯ ನಾಯಕರು ಈಶ್ವರಪ್ಪನವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ.

ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ.

ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

1 hour ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

15 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

16 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

16 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

17 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

18 hours ago