ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು.
ರಾಜ್ಯ ನಾಯಕರು ಈಶ್ವರಪ್ಪನವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ.
ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ.
ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…