ರಾಜ್ಯ

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ; ಮಂಡ್ಯದಿಂದ ಸ್ಪರ್ಧಿಸುವ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ವಿರುದ್ಧ ಸೋಲನುಭವಿಸಿದ್ದ ನಿಖಿಲ್‌ ಕುಮಾರಸ್ವಾಮಿ ಹೆಸರೂ ಸಹ ಈ ಕುರಿತಾಗಿ ಕೇಳಿಬರುತ್ತಿದ್ದು, ಸದ್ಯ ಸ್ವತಃ ನಿಖಿಲ್‌ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ. ನನ್ನ ಉದ್ದೇಶದ ಬಗ್ಗೆ ನನಗೆ ಸ್ಪಷ್ಟನೆ ಇದೆ. ವರ್ಷದ ಹಿಂದೆ ಈ ಕುರಿತು ಕೇಳಿದ್ದಾಗಲೂ ಸಹ ನಾನು ಇದೇ ಮಾತನ್ನು ಹೇಳಿದ್ದೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ನಾನಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು ( ಫೆಬ್ರವರಿ 11 ) ಮಾತನಾಡಿದ ಅವರು ಕಳೆದ ಕೆಲ ದಿನಗಳಿಂದ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಜೆಡಿಎಸ್‌ – ಬಿಜೆಪಿ ಮೈತ್ರಿಕೂಟದಿಂದ ನಾನು ನಿಲ್ಲುತ್ತಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವಲ್ಲ, ಕಳೆದ 25 ದಿನಗಳಿಂದ ಹಳೆ ಮೈಸೂರು ಭಾಗದ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ತಾಲೂಕುಗಳ ಮುಖಂಡರು, ಅಭ್ಯರ್ಥಿಗಳ ಹಾಗೂ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರುವ ಜವಾಬ್ದಾರಿಯನ್ನು ಪಕ್ಷ ನನಗೆ ವಹಿಸಿದೆ. ಈ ನಿಟ್ಟಿನಲ್ಲಿ ಮಂಡ್ಯದ ಹಲವು ತಾಲೂಕುಗಳಿಗೆ ಹೋಗಿ ಕೆಲಸ ಆರಂಭಿಸಿದ್ದೇನೆ ಎಂದರು.

2019ರ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದೆ. ಈ ಬಾರಿ ಚುನಾವಣೆ ಪ್ರಕ್ರಿಯೆಯಲ್ಲಿ ನೀವು ಬಂದು ಸಕ್ರಿಯರಾಗಿ ಭಾಗವಹಿಸಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಅವರ ಮಾತಿಗೆ ಬೆಲೆ ಕೊಟ್ಟು ಮಂಡ್ಯ ಮಾತ್ರವಲ್ಲದೇ ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಪ್ರಚಾರ ನಡೆಸುವ ಹಾಗೂ ಜನರ ಪ್ರೀತಿ ವಿಶ್ವಾಸ ಗಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಿಖಿಲ್‌ ಹೇಳಿಕೊಂಡರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

15 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

16 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

16 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

16 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago