ರಾಜ್ಯ

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ; ಮಂಡ್ಯದಿಂದ ಸ್ಪರ್ಧಿಸುವ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ವಿರುದ್ಧ ಸೋಲನುಭವಿಸಿದ್ದ ನಿಖಿಲ್‌ ಕುಮಾರಸ್ವಾಮಿ ಹೆಸರೂ ಸಹ ಈ ಕುರಿತಾಗಿ ಕೇಳಿಬರುತ್ತಿದ್ದು, ಸದ್ಯ ಸ್ವತಃ ನಿಖಿಲ್‌ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ನಾನು ಯೂಟರ್ನ್‌ ಹೊಡೆಯುವ ಗಿರಾಕಿಯಲ್ಲ. ನನ್ನ ಉದ್ದೇಶದ ಬಗ್ಗೆ ನನಗೆ ಸ್ಪಷ್ಟನೆ ಇದೆ. ವರ್ಷದ ಹಿಂದೆ ಈ ಕುರಿತು ಕೇಳಿದ್ದಾಗಲೂ ಸಹ ನಾನು ಇದೇ ಮಾತನ್ನು ಹೇಳಿದ್ದೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ನಾನಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು ( ಫೆಬ್ರವರಿ 11 ) ಮಾತನಾಡಿದ ಅವರು ಕಳೆದ ಕೆಲ ದಿನಗಳಿಂದ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಜೆಡಿಎಸ್‌ – ಬಿಜೆಪಿ ಮೈತ್ರಿಕೂಟದಿಂದ ನಾನು ನಿಲ್ಲುತ್ತಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವಲ್ಲ, ಕಳೆದ 25 ದಿನಗಳಿಂದ ಹಳೆ ಮೈಸೂರು ಭಾಗದ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ತಾಲೂಕುಗಳ ಮುಖಂಡರು, ಅಭ್ಯರ್ಥಿಗಳ ಹಾಗೂ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರುವ ಜವಾಬ್ದಾರಿಯನ್ನು ಪಕ್ಷ ನನಗೆ ವಹಿಸಿದೆ. ಈ ನಿಟ್ಟಿನಲ್ಲಿ ಮಂಡ್ಯದ ಹಲವು ತಾಲೂಕುಗಳಿಗೆ ಹೋಗಿ ಕೆಲಸ ಆರಂಭಿಸಿದ್ದೇನೆ ಎಂದರು.

2019ರ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದೆ. ಈ ಬಾರಿ ಚುನಾವಣೆ ಪ್ರಕ್ರಿಯೆಯಲ್ಲಿ ನೀವು ಬಂದು ಸಕ್ರಿಯರಾಗಿ ಭಾಗವಹಿಸಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಅವರ ಮಾತಿಗೆ ಬೆಲೆ ಕೊಟ್ಟು ಮಂಡ್ಯ ಮಾತ್ರವಲ್ಲದೇ ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಪ್ರಚಾರ ನಡೆಸುವ ಹಾಗೂ ಜನರ ಪ್ರೀತಿ ವಿಶ್ವಾಸ ಗಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಿಖಿಲ್‌ ಹೇಳಿಕೊಂಡರು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago