ರಾಜ್ಯ

ನಾನು ಸಾಲದ ರಾಮಯ್ಯ ಎಲ್ಲ, ಅನ್ನದ ರಾಮಯ್ಯ : ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.

ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.

ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದರು.

ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ ಇದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023. ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.

ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

2 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

2 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

2 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

5 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

8 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

8 hours ago