ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.
ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.
ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.
ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದರು.
ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ ಇದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023. ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.
ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದು ವಿವರಿಸಿದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…