ವಿಜಯಪುರ: ಉಚ್ಛಾಟನೆ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರುತ್ತಲೇ ಬರುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಪಕ್ಷದಿಂದ ಉಚ್ಛಾಟನೆಯನ್ನೇ ಸವಾಲಾಗಿ ಸ್ವೀಕರಿಸಿರುವ ಶಾಸಕ ಯತ್ನಾಳ್ ಅವರು, ಹೊಸ ಪಕ್ಷವನ್ನು ಸ್ಥಾಪನೆ ಮಾಡುವುದಾಗಿ ಗುಡುಗಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಿಂದೂಗಳ ರಕ್ಷಣೆ ಆಗಲ್ಲ. ಆದ್ದರಿಂದ ಹಿಂದೂಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಜಯೇಂದ್ರ ಒಬ್ಬ ಮಹಾಭ್ರಷ್ಟ. ವಿಜಯೇಂದ್ರ ಮೇಲೆ ಸಾಕಷ್ಟು ಕೇಸ್ಗಳಿವೆ. ಇವರಿಂದ ಹಿಂದೂಗಳ ರಕ್ಷಣೆ ಆಗಲ್ಲ ಎಂದು ಕಿಡಿಕಾರಿದರು.
ಇನ್ನು ಜನರ ಅಭಿಪ್ರಾಯ ಸಂಗ್ರಹಿಸಿ ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ. ಹಿಂದೂ ಪಕ್ಷ ಕಟ್ಟುವ ಬಗ್ಗೆ ಬೀದರ್ನಿಂದ ಹಿಡಿದು ಚಾಮರಾಜನಗರದವರೆಗೂ ಒತ್ತಾಯಿಸಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷದ ರಚನೆ ಮಾಡುತ್ತೇವೆ ಎಂದು ಯಡಿಯೂರಪ್ಪ ಕುಟುಂಬಕ್ಕೆ ಎಚ್ಚರಿಕೆ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…